header ads

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ಮಂಗಳೂರು ಜಿಲ್ಲಾ ನ್ಯಾಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಜಿಯನ್ನು ಆನ್‌ಲೇನ್‌ ಮುಖಾಂತರ ಮಾತ್ರ ಸಲ್ಲಿಕೆ ಮಾಡಬಹುದಾಗಿದೆ.

      ಇಲ್ಲಿ ಒಟ್ಟು ಹುದ್ದೆಗ 34 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

       ಜವಾನ ಹುದ್ದೆಗಳಿಗೆ ವೇತನ ಶ್ರೇಣಿಯು 17,000ರೂ.ಗಳಿಂದ 28950ರೂಗಳಾಗಿದೆ.

      ಹುದ್ದೆಗಳ ವಿವರ ಇನ್ನಿತರ ವಿಷಯಗಳನ್ನು ತಿಳಿಯಲು ಕೆಳಗೆ ನೀಡಲಾದ ನೋಟಿಫಿಕೇಶನ್‌ ಅನ್ನು ಡೊನ್ಲೋಡ್‌ ಮಾಡಿಕೊಳ್ಳಬಹುದಾಗಿದೆ.

     ಈ ಹುದ್ದೆಗಳಿಗೆ ವಿದ್ಯಾರ್ಹತೆಯನ್ನು ನೋಡುವುದಾದರೆ ಕರ್ನಾಟಕ ಪ್ರೋಡಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.ಹಾಗೂ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.

    ವಯೋಮಿತಿಯ ಬಗ್ಗೆ ತಿಳಿಯುವುದಾದರೆ,ಅರ್ಜಿ ಸಲ್ಲಿಸುವ ಅಬ್ಯರ್ಥಿಗಳು ಅರಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಓಳಗಾಗಿ ಕನಿಷ್ಠ 18ವರ್ಷ ವಯಸ್ಸಾಗಿರಬೇಕು.ಗರಿಷ್ಠ ಪ.ಜಾತಿ/ಪ.ಪಂಗಡ ಹಾಗೂ ಪ್ರವರ್ಗ-೧ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40ವರ್ಷಗಳು ( ಸಂಬಧಿಸಿದ ಪ್ರಾಧಿಕಾರ ನೀಡುವ ಜಾತಿ ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಅನ್ವಯವಾಗುತ್ತದೆ.)ಪ್ರವರ್ಗ-2ಎ,2ಬಿ,3ಎ,3ಬಿ, ಗಳಿಗೆ ಸೇರಿದ ಅಭ್ಯರ್ಥಿಗಳಿಗೆ 38 ವರ್ಷಗಳು.  ( ಸಂಬಧಿಸಿದ ಪ್ರಾಧಿಕಾರ ನೀಡುವ ಜಾತಿ ಪ್ರಮಾಣ ಪತ್ರ ಹೊಂದಿದ್ದರೆ ಮಾತ್ರ ಅನ್ವಯವಾಗುತ್ತದೆ.) ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು.

     ಸಾಮಾನ್ಯ ವರ್ಗ,2ಎ,2ಬಿ,3ಎ,3ಬಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200 ನಿಗದಿಪಡಿಸಲಾಗಿದೆ.ಪ.ಜಾತಿ/ಪ.ಪಂಗಡ/ಪ್ರವರ್ಗ-೧ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯತಿ ಇರುತ್ತದೆ.

      ಆನ್ಲೇನ್‌ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ 19-04-2021 ರಿಂದ 25-05-2021 ರ ರಾತ್ರಿ 11:59 ಗಂಟೆಯವರೆಗೆ ಇರುತ್ತದೆ 

   Notification